ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆ: ನಟ ಸುದೀಪ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ನಟ ಸುದೀಪ್ ಅವರು ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಅವರು, ಬೊಮ್ಮಾಯಿ ಅವರನ್ನು ಬೆಂಬಲಿಸಿ, ಅವರು ಹೇಳುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದಾಗಿ ತಿಳಿಸಿದರು.
ಬಿಜೆಪಿ ಪಕ್ಷ ಸೇರುತ್ತಿಲ್ಲ, ರಾಜಕೀಯವನ್ನು ಪ್ರವೇಶಿಸುತ್ತಿಲ್ಲ. ಬಸವರಾಜ ಬೊಮ್ಮಾಯಿ ಅವರು ನನ್ನ ಕಷ್ಟದ ಸಮಯದಲ್ಲಿ ನನ್ನ ಜತೆ ನಿಂತವರು. ಈಗ ವೈಯಕ್ತಿಕ ನೆಲೆಯಲ್ಲಿ ಮಾತ್ರ ಬೊಮ್ಮಾಯಿ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ. ಹಾಗೆಂದು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.


ಚುನಾವಣೆಗೆ ನಾನು ನಿಲ್ಲುತ್ತಿಲ್ಲ, ನಿಲ್ಲಬೇಕು ಎಂದಾದರೆ ಓಪನ್ ಆಗಿ ಹೇಳಿ ನಿಲ್ಲುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Join Whatsapp