ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ: ಸಿದ್ದರಾಮಯ್ಯ ಸ್ಪಷ್ಟನೆ

Prasthutha|

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

- Advertisement -

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋಲಾರ, ಬದಾಮಿ ಹಾಗೂ ವರುಣಾದಲ್ಲಿ ಸ್ಪರ್ಧಿಸುವಂತೆ ಆಹ್ವಾನವಿದೆ. ಚುನಾವಣೆ ಘೋಷಣೆ ನಂತರ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ತಿಳಿಸಲಾಗುವುದು. ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ಸಮೀಕ್ಷೆಯೊಂದು ಸೋಲಿನ ಮುನ್ಸೂಚನೆ ನೀಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಮೀಕ್ಷೆ ನಡೆಸುವುದರಲ್ಲಿ ತಪ್ಪೇನಿದೆ. ಕ್ಷೇತ್ರದ ಆಯ್ಕೆಗೆ ನಾನು ಸಮೀಕ್ಷೆ ಮಾಡಿಸುತ್ತಿಲ್ಲ. ಪಕ್ಷವೇ ಮಾಡಿಸಿದೆ. ಸುರಕ್ಷಿತ ಜಾಗದಲ್ಲಿ ನಿಂತರೆ ತಪ್ಪೇನು. ನರೇಂದ್ರ ಮೋದಿ ಎರಡು ಕಡೆ ಏಕೆ ನಿಂತಿದ್ದರು? ಸಮೀಕ್ಷೆ ನಡೆಸದೇ ಅವರು ನಿಂತು ಬಿಟ್ಟಿದ್ದರೇ’ ಎಂದು ಪ್ರಶ್ನಿಸಿದರು.

- Advertisement -

ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದ್ದು, ಈ ಬಗ್ಗೆ ದೂರು ನೀಡಲಾಗಿದೆ. ನಾಳೆ ಚುನಾವಣಾ ಆಯೋಗದ ಮುಂದೆ ಧರಣಿ ಮಾಡುತ್ತೇವೆ. ಬಿಬಿಎಂಪಿ ಆಯುಕ್ತರು ಖಾಸಗಿ ಕಂಪನಿಗೆ ಇದನ್ನ ವಹಿಸಿದ್ದಾರೆಂದು ತಿಳಿಸಿದರು.

Join Whatsapp