ಕಾಂಗ್ರೆಸ್ ಸೇರ್ಪಡೆಯಾಗಿ ತಪ್ಪು ಮಾಡಿದೆ, ಪಕ್ಷಕ್ಕೆ ರಾಜೀನಾಮೆ ನೀಡುವೆ: ವೈಎಸ್’ವಿ ದತ್ತಾ

Prasthutha|

ಚಿಕ್ಕಮಗಳೂರು: ಕಾಂಗ್ರೆಸ್ ಸೇರ್ಪಡೆಯಾಗಿ ತಪ್ಪು ಮಾಡಿದೆ, ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದು ವೈಎಸ್’ವಿ ದತ್ತಾ ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ವೈಎಸ್ವಿ ದತ್ತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇಂದು(ಏಪ್ರಿಲ್ 09) ಕಡೂರಿನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ದತ್ತಾ ಅವರು ಟವಲ್ ಗುರುತಿನಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಯಿಸಿದ ದತ್ತಾ, ಕಾಂಗ್ರೆಸ್ ಸೇರ್ಪಡೆಯಾಗಿ ತಪ್ಪು ಮಾಡಿದೆ. ಈ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಇದೆ ಎಂದು ಸ್ಪಷ್ಟಪಡಿಸಿದರು.

- Advertisement -

ಕಡೂರಿನಲ್ಲಿ ಮಾತನಾಡಿದ ದತ್ತಾ, ಕಾಂಗ್ರೆಸ್ ಸೇರ್ಪಡೆಯಾಗಿದ್ದು ತಪ್ಪಾಗಿದೆ. ಈ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಇದೆ. ಅಭಿಮಾನಿಗಳು ಪಕ್ಷೇತರರಾಗಿ ನಿಲ್ಲುವಂತೆ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವಂತೆ ಅಭಿಮಾನಿಗಳೇ ಹೇಳಿದ್ದರು. ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೆ. ಮುಂದಿನ ತೀರ್ಮಾನ ಎಲ್ಲವೂ ನನ್ನ ಅಭಿಮಾನಿಗಳು ಕೈಗೊಳ್ಳುತ್ತಾರೆ. ದೊಡ್ಡ ನಾಯಕರ ಬಗ್ಗೆ ಚರ್ಚೆ ಮಾಡುವಷ್ಟು ನಾನು ದೊಡ್ಡವನಲ್ಲ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಡೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದತ್ತಾ ಸ್ಪರ್ಧೆ ವಿಚಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಟಿಕೆಟ್ ಕೊಡುತ್ತೇವೆ ಎಂದು ಷರತ್ತು ಹಾಕಿ ಪಕ್ಷಕ್ಕೆ ಸೇರಿಸಿಕೊಂಡಿರಲಿಲ್ಲ. YSV ದತ್ತಾ ಕಾಂಗ್ರೆಸ್ ಸೇರಬೇಕಾದರೆ ಏನು ಮಾತಾಡಿದ್ದರೆಂದು ಅದನ್ನು ಗಮನಿಸಿ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಕೊಡಬೇಕು, ಕೊಡುತ್ತೇವೆ ಎಂದರು.

- Advertisement -

ಇನ್ನು ಇದೇ ವಿಚಾರವಾಗಿ ಮಂಗಳೂರಿನಲ್ಲಿ ರಾಜ್ಯಸಭಾ ಸದಸ್ಯ L.N.ಹನುಮಂತಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದು, ಬಂಡಾಯ ಅಭ್ಯರ್ಥಿಗಳನ್ನು ಕರೆದು ಮಾತುಕತೆ ನಡೆಸಲಾಗುತ್ತಿದೆ. ಅಧಿಕಾರಕ್ಕೆ ಬಂದ ಮೇಲೆ ಬೇರೆ ಅವಕಾಶ ಮಾಡಿಕೊಡಲಾಗುತ್ತದೆ. ಒಂದೆರಡು ಕಡೆ ಪಕ್ಷೇತರವಾಗಿ ನಿಲ್ಲುವ ಬಗ್ಗೆ ಘೋಷಣೆ ಮಾಡಿದ್ದಾರೆ. ದತ್ತಾರನ್ನು ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುತ್ತೇವೆ ಎಂದು ಹೇಳಿರಲಿಲ್ಲ. ಆದರೆ ದತ್ತಾಗೆ ಟಿಕೆಟ್ ಸಿಗಬಹುದು ಎಂದು ಅಂದಾಜಿಸಲಾಗಿತ್ತು ಎಂದರು.

Join Whatsapp