ಉಪೇಂದ್ರ, ಸಚಿವ ಮಲ್ಲಿಕಾರ್ಜುನ ಪ್ರಕರಣದ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ: ಪರಮೇಶ್ವರ್

Prasthutha|

ಬೆಂಗಳೂರು: ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇಬ್ಬರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರು ಕೂಡಾ ಇಂತಹ ಹೇಳಿಕೆಗಳನ್ನು ಸಹಿಸಲ್ಲ. ಹೀಗೆ ಮಾತನಾಡೋರು ಅರ್ಥ ಮಾಡಿಕೊಳ್ಳಬೇಕು. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡೋದು ಯಾರೇ ಆದರು ನಿಲ್ಲಿಸಬೇಕು. ಗಾದೆ ಇದೆ ಅಂತ ಹೇಳಿ ಕೀಳಾಗಿ ಮಾತಾಡೋದು ಸರಿಯಲ್ಲ. ಇದೊಂದು ನಾನ್ಸೆನ್ಸ್ ಹೇಳಿಕೆ ಎಂದು ಕಿಡಿಕಾರಿದರು.


ಇದನ್ನು ನಿಲ್ಲಿಸಿದರೆ ಒಳ್ಳೆಯದು. ಇದನ್ನು ನಾನು ಕೂಡಾ ಸಹಿಸಲ್ಲ. ಹೀಗೆ ಮಾತನಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ? ಸಚಿವರೇ ಆಗಲಿ ಯಾರೇ ಆಗಲಿ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Join Whatsapp