ವಿಜಯೇಂದ್ರ, ಅಶೋಕ್ ಸೇರಿ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಪ್ರಿಯಾಂಕ್ ಖರ್ಗೆ

Prasthutha|

ಬೆಳಗಾವಿ: ಕಲಬುರಗಿ ಬಿಜೆಪಿ ಮುಖಂಡ ಮಣಿಕಾಂತ್‌ ರಾಥೋಡ್‌ ಮೇಲೆ ತಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಮಾನನಷ್ಠ ಮೊಕದ್ದಮೆ ದಾಖಲಿಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ಬಿಜೆಪಿ ನಾಯಕರ ನಿರಂತರ ಮೌಖಿಕ ದಾಳಿಯಿಂದ ತನಗೆ ನೋವಾಗಿದೆ ಮತ್ತು ತನ್ನ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿದೆ ಎಂದು ಹೇಳಿದ ಪ್ರಿಯಾಂಕ್, ದೂರುದಾರರ (ಮಣಿಕಂಠ ರಾಠೋಡ್) ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದರು. ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರದಿಂದ ಮಣಿಕಂಠ ರಾಠೋಡ್ ಅವರನ್ನು ಸೋಲಿಸಿದ್ದರು.

Join Whatsapp