ಉಕ್ರೇನ್ ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣಕ್ಕೆ ಹಣಕಾಸು ನೆರವು: ಮುಖ್ಯಮಂತ್ರಿ ಚಂದ್ರಶೇಖರ್ ರಾವ್

Prasthutha|

ಹೈದರಾಬಾದ್: ಕಳೆದ ಕೆಲವು ವಾರಗಳಿಂದ ತೆಲಂಗಾಣ ಸರ್ಕಾರವು ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಈ ವಿಷಯವನ್ನು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪ್ರಕಟಿಸಿದ್ದಾರೆ.

- Advertisement -

“ಉಕ್ರೇನ್ ನಿಂದ ಹಿಂದಿರುಗಿದ ಈ 700 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ತೆಲಂಗಾಣ ಸರ್ಕಾರ ಅವರ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ನಾವು ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಲು ನಮ್ಮ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರು ಶೀಘ್ರದಲ್ಲೇ ಕೇಂದ್ರಕ್ಕೆ ಪತ್ರ ಬರೆಯುತ್ತಾರೆ’ ಎಂದು ಕೆಸಿಆರ್ ವಿಧಾನಸಭೆಯಲ್ಲಿ ಹೇಳಿದರು.

ಉಕ್ರೇನ್ ನಿಂದ ದೆಹಲಿಗೆ ಬಂದಿಳಿದ 740 ವಿದ್ಯಾರ್ಥಿಗಳನ್ನು ಸರ್ಕಾರ ತನ್ನ ಸ್ವಂತ ಖರ್ಚಿನಲ್ಲಿ ರಾಜ್ಯಕ್ಕೆ ಕರೆತಂದಿದೆ ಎಂದು ಸಿಎಂ ಹೇಳಿದರು.

- Advertisement -

ಉಕ್ರೇನ್ ನಲ್ಲಿ ಸುಮಾರು 20 ರಿಂದ 25 ಲಕ್ಷ ರೂಪಾಯಿ ವೆಚ್ಚವಾಗುವುದರಿಂದ ವಿದ್ಯಾರ್ಥಿಗಳು ತಮ್ಮ ಎಂಬಿಬಿಎಸ್ ಓದಲು ಹೋಗಿದ್ದಾರೆ ಎಂದು ಅವರು ಹೇಳಿದರು.

Join Whatsapp