ಹೆಡಗೇವಾರ್ ತರಹದ ಹೇಡಿಗಳನ್ನು ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ: ಬಿ.ಕೆ ಹರಿಪ್ರಸಾದ್

Prasthutha|

ಶಿವಮೊಗ್ಗ: ಆರ್ ಎಸ್ ಎಸ್ ಸಂಸ್ಥಾಪಕ ಹೆಡಗೇವಾರ್ ತರಹದ ಹೇಡಿಗಳನ್ನು ಮಕ್ಕಳ ಪಠ್ಯದಲ್ಲಿ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಎಂದು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ ಬ್ರಿಟಿಷರಿಗೆ ಯಾಕೆ ನಾನು ಕ್ಷಮಾಪಣೆ ಕೇಳಿದ್ದೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ಇಂತಹ ರಣಹೇಡಿಗಳ ಬಗ್ಗೆ ನಮ್ಮ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ ಎಂದು ಹೇಳಿದರು.
ಇದನ್ನು ಬಿಜೆಪಿ ಅವರು ಎಲೆಕ್ಷನ್ ಅಜೆಂಡವಾಗಿ ಮಾಡಿಕೊಂಡರೆ ಬಹಳ ಸಂತೋಷ. ಈ ಬಾರಿ ಅವರನ್ನು ಜನ ಮನೆಗೆ ಕಳಿಸಿದ್ದಾರೆ. ಮುಂದಿನ ಬಾರಿ ಅವರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.


ಪಠ್ಯಪುಸ್ತಕ ಒಂದೇ ಅಲ್ಲ, ಬಿಜೆಪಿ ಅನೈತಿಕ ಸರ್ಕಾರ ಮಾಡಿದ ನಂತರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನೇ ಸಂಪೂರ್ಣ ಕೇಸರಿಕರಣ ಮಾಡಲು ಹೊರಟಿದ್ದರು. ಭಾರತ ಸಾವಿರಾರು ವರ್ಷದಿಂದ ಜಾತ್ಯತೀತ ರಾಷ್ಟ್ರವಾಗಿ ಉಳಿದುಕೊಂಡಿದೆ. ಇದರ ಅರಿವಿಲ್ಲದೇ ವ್ಯವಸ್ಥೆ ಬುಡಮೇಲು ಮಾಡಲು ಬಿಜೆಪಿ ಹೊರಟಿತ್ತು. ಎಲ್ಲಾ ಕಡೆ ಬಿಜೆಪಿ, ಆರ್ ಎಸ್ಎಸ್ ತಮ್ಮ ಸಿದ್ದಾಂತವನ್ನು ತೂರಲು ಪ್ರಯತ್ನ ಮಾಡಿದ್ದಾರೆ. ಆ ಎಲ್ಲಾ ಕ್ಷೇತ್ರದಲ್ಲೂ ಸರಿ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ ಎಂದರು.

Join Whatsapp