ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ಹೋರಾಟ ಆರಂಭಿಸುತ್ತೇನೆ: ಯಡಿಯೂರಪ್ಪ

Prasthutha|

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪ್ರವಾಸ, ಹೋರಾಟ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22 – 23 ಸ್ಥಾನ ಗೆಲ್ಲಲು ಬೇಕಾದ ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಯಡಿಯೂರಪ್ಪ ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ. ರಾಜ್ಯದ ಉದ್ದಗಲಕ್ಕೆ ಮತ್ತೆ ಓಡಾಟ ಮಾಡುತ್ತೇನೆ. ಹೋರಾಟ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22-23 ಸ್ಥಾನ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಏನೇನು ಪ್ರಯತ್ನ ಬೇಕೋ ಅದನ್ನು ಮಾಡುತ್ತೇನೆ. ನನ್ನ ಪ್ರವಾಸ ಮೂರ್ನಾಲ್ಕು ದಿನದಲ್ಲಿ ಆರಂಭವಾಗಲಿದೆ. ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಪಕ್ಷವನ್ನು ಸದೃಢಗೊಳಿಸುವ ನಿರ್ಧಾರವನ್ನು ತಿಳಿಸಿದ್ದಾರೆ.

Join Whatsapp