Home ಟಾಪ್ ಸುದ್ದಿಗಳು ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ಹೋರಾಟ ಆರಂಭಿಸುತ್ತೇನೆ: ಯಡಿಯೂರಪ್ಪ

ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ಹೋರಾಟ ಆರಂಭಿಸುತ್ತೇನೆ: ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪ್ರವಾಸ, ಹೋರಾಟ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22 – 23 ಸ್ಥಾನ ಗೆಲ್ಲಲು ಬೇಕಾದ ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಯಡಿಯೂರಪ್ಪ ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ. ರಾಜ್ಯದ ಉದ್ದಗಲಕ್ಕೆ ಮತ್ತೆ ಓಡಾಟ ಮಾಡುತ್ತೇನೆ. ಹೋರಾಟ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22-23 ಸ್ಥಾನ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಏನೇನು ಪ್ರಯತ್ನ ಬೇಕೋ ಅದನ್ನು ಮಾಡುತ್ತೇನೆ. ನನ್ನ ಪ್ರವಾಸ ಮೂರ್ನಾಲ್ಕು ದಿನದಲ್ಲಿ ಆರಂಭವಾಗಲಿದೆ. ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಪಕ್ಷವನ್ನು ಸದೃಢಗೊಳಿಸುವ ನಿರ್ಧಾರವನ್ನು ತಿಳಿಸಿದ್ದಾರೆ.

Join Whatsapp
Exit mobile version