Home ಟಾಪ್ ಸುದ್ದಿಗಳು ಬೆದರಿಕೆ ಸಂದೇಶ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ: ಮಧು ಬಂಗಾರಪ್ಪ

ಬೆದರಿಕೆ ಸಂದೇಶ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ: ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಬೆದರಿಕೆ ಸಂದೇಶ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಯಾವುದನ್ನು ಹಗುರವಾಗಿ ತೆಗೆದುಕೊಳ್ಳುವ ಹಾಗೆ ಇಲ್ಲ. ಬೆದರಿಕೆ ಸಂದೇಶ ಬಂದಿರುವ ಎಲ್ಲಾ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ. ಶಾಂತಿಯನ್ನು ಕದಡುವ ಕೆಲಸ ಮಾಡಿದ್ದಾರೆ. ಗೃಹ ಸಚಿವರು, ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಯಾರೂ ಆತಂಕಗೊಳ್ಳುವುದು ಬೇಡ ಧೈರ್ಯವಾಗಿರಿ ಎಂದು ಹೇಳಿದರು.

Join Whatsapp
Exit mobile version