Home ಟಾಪ್ ಸುದ್ದಿಗಳು ಕಾಂಗ್ರೆಸ್ ಅಧಿಕಾರಕ್ಕೇರಿದರೆ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ಆರೋಪಿಗಳನ್ನು ಶಿಕ್ಷಿಸುತ್ತೇವೆ: ಹರೀಶ್ ರಾವತ್

ಕಾಂಗ್ರೆಸ್ ಅಧಿಕಾರಕ್ಕೇರಿದರೆ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ಆರೋಪಿಗಳನ್ನು ಶಿಕ್ಷಿಸುತ್ತೇವೆ: ಹರೀಶ್ ರಾವತ್

ಲಕ್ನೋ: ಉತ್ತರಾಖಂಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧ್ವೇಷ ಭಾಷಣ ಮತ್ತು ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಆರೋಪಿಗಳನ್ನು ಶಿಕ್ಷಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದೆಲ್ಲೆಡೆ ಬಿಜೆಪಿ ಮತ್ತು ಆರೆಸ್ಸೆಸ್ ಮುಸ್ಲಿಮರ ವಿರುದ್ಧ ಧ್ವೇಷ ಮತ್ತು ಹಿಂಸಾತ್ಮಕ ಹೇಳಿಕೆಯನ್ನು ಹರಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಂತರಿಕ ಕಚ್ಚಾಟದ ವರದಿಯನ್ನು ತಳ್ಳಿಹಾಕಿದ ಅವರು ನಾವೆಲ್ಲರೂ ಒಂದಾಗಿದ್ದೇವೆ. ಸೋನಿಯಾ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಉತ್ತರಾಖಂಡದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ತಿಳಿಸಿದರು.

Join Whatsapp
Exit mobile version