Home ಟಾಪ್ ಸುದ್ದಿಗಳು 15 ದಿನ ಬಿಟ್ಟು ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುತ್ತೇವೆ: ಬೈರತಿ ಸುರೇಶ್

15 ದಿನ ಬಿಟ್ಟು ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುತ್ತೇವೆ: ಬೈರತಿ ಸುರೇಶ್

ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಏನೆಲ್ಲಾ ಮಾಡಿದ್ದಾರೆ? ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆಯವರು ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ? ದಾಖಲೆ ಸಂಗ್ರಹಿಸಲು ಹೇಳಿದ್ದೇನೆ. 15 ದಿನ ಬಿಟ್ಟು ಅವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಬೈರತಿ ಸುರೇಶ್ ಬಾಂಬ್ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.


ಶೋಭಾ ಕರಂದ್ಲಾಜೆ ಅವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಅವರು ಏನೆಲ್ಲಾ ಮಾಡಿದ್ದಾರೆ? ಇಂಧನ ಸಚಿವರಾಗಿದ್ದ ಶೋಭಾ ಕರಂದ್ಲಾಜೆಯವರು ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ? ಈ ಸಂಬಂಧ ಪೊನ್ನಣ್ಣ ಅವರಿಗೆ ಇದರ ಎಲ್ಲಾ ದಾಖಲೆ ಸಂಗ್ರಹಿಸಲು ಹೇಳಿದ್ದೇನೆ. 15 ದಿನ ಬಿಟ್ಟು ಅವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದರು.


ಹೆಚ್. ವಿಶ್ವನಾಥ್ ಆಧಾರ ರಹಿತ ಆರೋಪ ಮಾಡ್ತಿದ್ದಾರೆ. ಗೊಬೆಲ್ಸ್ ವಂಶಸ್ಥರು ಅವರು, ವಿಶ್ವನಾಥ್ ಥರ್ಡ್ ಗ್ರೇಡ್ ವ್ಯಕ್ತಿ. ನನ್ನ ಪೂರ್ವಜರಿಂದ ಬಂದ ಪ್ರಾಪರ್ಟಿಗೂ ಸಿದ್ದರಾಮಯ್ಯ ಕುಟುಂಬಕ್ಕೂ ಏನು ಸಂಬಂಧ? ವಿಶ್ವನಾಥ್ ಗೆ ಮತಿಭ್ರಮಣೆ ಆಗಿದೆ ಎಂದು ಲೇವಡಿ ಮಾಡಿದ್ದಾರೆ.

Join Whatsapp
Exit mobile version