15% ಕಮಿಷನ್ ಆರೋಪ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು: ನಾನು 15% ಕಮೀಷನ್ ಕೇಳಿದ್ದೇನೆ ಅಂತ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ, ಅಶೋಕ್ ಅವರ ಅವಧಿಯಲ್ಲಿ ಯಾಕೆ ಹಣ ಬಿಡುಗಡೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಕೆಂಪಣ್ಣ ಎಲ್ಲೂ ಅಧಿಕಾರಿಗಳು ಹಣ ಕೇಳಿದ್ದಾರೆ ಅಂತ ಹೇಳಿಲ್ಲ. ಹಾಗೇನಾದರು ಯಾರಾದರು ಕೇಳಿದರೆ ಆ ಅಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದರು.


ನಮ್ಮ ಅಧಿಕಾರಿಗಳಿಂದ ವರದಿ ಕೇಳಿದ್ದೀನಿ, ಯಾರು ಯಾರು ಮಾತನಾಡುತ್ತಿದ್ದಾರೆ, ಯಾರು ಯಾರ ಹಿಂದಿದ್ದಾರೆ ಎಲ್ಲಾ ನನಗೆ ಗೊತ್ತು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Join Whatsapp