ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ

Prasthutha|

ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ ಖಾಲಿಯಿತ್ತು, ಯಡಿಯೂರಪ್ಪ ಏನೋ ಮಾಡಿ ಶಾಸಕನಾಗಿದ್ದ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದ್ದು, ಇದು ಬಹಳ ದಿನ ಉಳಿಯುವುದಿಲ್ಲ ಎಂದರು.


ಕುಟುಂಬ ಹಿಡಿತಕ್ಕೆ ಪಕ್ಷ ಸಿಲುಕಬಾರದು ಎಂಬ ಪ್ರಧಾನಿ ಮೋದಿ ಆಶಯಕ್ಕೆ ವಿರುದ್ದವಾಗಿ ಕರ್ನಾಟಕದಲ್ಲಿ ಬಿಜೆಪಿ ಸ್ಥಿತಿಯಿದೆ. ಯಡಿಯೂರಪ್ಪ ಕುಟುಂಬ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬುದನ್ನು ನಾನು ಹೇಳುತ್ತಿಲ್ಲ. ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ ಬಹಿಂಗವಾಗಿ ವಿಜಯೇಂದ್ರ ನಮ್ಮ ಭಿಕ್ಷೆಯಿಂದ ನೀನು ಗೆದ್ದಿದ್ದೀಯ ಎಂದಿದ್ದು, ಯಡಿಯೂರಪ್ಪ ಬಿಜೆಪಿಗೆ, ಡಿಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆ ಎಂದರು.



Join Whatsapp