ಭಗವದ್ಗೀತೆಯಿಂದ ಮಕ್ಕಳ ಹೊಟ್ಟೆ ತುಂಬುತ್ತದೆಯೇ: ಕುಮಾರಸ್ವಾಮಿ ಪ್ರಶ್ನೆ

Prasthutha|

ರಾಮನಗರ: ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಿದರೆ ಮಕ್ಕಳ ಹೊಟ್ಟೆ ತುಂಬುತ್ತದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಚನ್ನಪಟ್ಟಣದ ಕದರಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನು ಬಗೆಹರಿಸುವುದೂ ಅವರಿಗೆ ಬೇಕಿಲ್ಲ. ಸರ್ಕಾರದ ಮುಂದೆ ಟನ್ ಗಟ್ಟಲೆ‌ ಸಮಸ್ಯೆಗಳಿವೆ. ಮೊದಲು ಅದನ್ನು ಬಗೆಹರಿಸಲಿ. ಅಧಿಕಾರಕ್ಕಾಗಿ ಅಮಾಯಕರನ್ನು ಭಾವನಾತ್ಮಕವಾಗಿ ದಾರಿ‌ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳೇ ದೊಡ್ಡದಾಗಿ ಪ್ರಚಾರ ಆಗುತ್ತಿವೆ.‌ ಇದಕ್ಕೂ ಒಂದು ಅಂತಿಮ ಎಂಬುದು ಇರುತ್ತದೆ. ಯಾವುದೂ ಶಾಶ್ವತ ಅಲ್ಲ ಎಂದರು. 

Join Whatsapp