ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ| ವಿಮೆನ್ ಇಂಡಿಯಾ ಮೂವ್ಮೆಂಟ್ ಕಾಪು ಘಟಕದ ವತಿಯಿಂದ ಪ್ರತಿಭಟನೆ

Prasthutha|

ಉಡುಪಿ: ರಾಷ್ಟ್ರೀಯ ಮಹಿಳಾ ಕುಸ್ತಿ ಪಟುಗಳ ಮೇಲೆ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್ ನಲ್ಲಿ ಕುಸ್ತಿ ಪಟು ಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮೇ.2ರಂದು ಶುಕ್ರವಾರ ಕಾಪು ಪೇಟೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕಾಪು ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

- Advertisement -

ಕಳೆದ ಮೂರು ತಿಂಗಳಿನಿಂದ ದೆಹಲಿಯ ಜಂತ‌ ಮಂತರ್ ನಲ್ಲಿ ಕುಸ್ತಿಪಟುಗಳು ಪ್ರತಿಭಟನೆಯನ್ನು ನಡೆಸುತ್ತಿದ್ದು ಆರೋಪಿ, ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸಹ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಈ ದೇಶಕ್ಕೆ ಕೀರ್ತಿಯನ್ನು ತಂದಂತಹ ಹೆಮ್ಮೆಯ ಮಹಿಳಾ ಕುಸ್ತಿಪಟುಗಳಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅರೋಪಿಯನ್ನು ಬಂಧಿಸಲು ಕೇಂದ್ರ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಕುಸ್ತಿಪಟುಗಳು ಹೊಸ ಸಂಸತ್ ಭವನ ಉದ್ಘಾಟನೆಯಂದು ಸಂಸತ್ ಭವನದ ಮುಂದೆ ಪ್ರತಿಭಟನೆಯನ್ನು ನಡೆಸುವ ವೇಳೆ ಪೊಲೀಸರು ಅವರ ಮೇಲೆ ದೌರ್ಜನ್ಯವನ್ನು ಎಸೆಗಿದ್ದು, ಇದು ಅಮಾನುಷ ಕೃತ್ಯವಾಗಿದೆ ಎಂದು WIM ನ
ಜಿಲ್ಲಾಧ್ಯಕ್ಷೆಯಾದ ನಾಝಿಯಾ ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದ ನಿರೂಪಣೆ
ಯನ್ನು ಫರಾ ಹಾಗೂ ನಸೀಮಾ ಅವರು ನೇರವೇರಿಸಿದರು.

- Advertisement -

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ನಾಝಿಯ, WIM ಉಪಾಧ್ಯಕ್ಷರಾದ ನಸೀಮಾ , ಪ್ರಧಾನ ಕಾರ್ಯದರ್ಶಿಯಾದ ರಹೀಮಾ ಕಾಪು, WIM ಜೊತೆ ಕಾರ್ಯದರ್ಶಿ ಹಾಜಿರ, ವಿಮೆನ್ ಇಂಡಿಯಾ ಮೂವ್ಮೆಂಟ್ ಕಾಪು ಘಟಕದ ಅಧ್ಯಕ್ಷರಾದ ಫರ್ಝಾನ, ಪ್ರಧಾನ ಕಾರ್ಯದರ್ಶಿಯಾದ ನೌಸೀನ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Join Whatsapp