ಸಿಎಎ-ಎನ್‌ಆರ್‌ಸಿ, ಶಬರಿಮಲೆ ಪ್ರತಿಭಟನೆಯ ಪ್ರಕರಣಗಳನ್ನು ಹಿಂಪಡೆಯಲು ಕೇರಳ ಸರಕಾರ ನಿರ್ಧಾರ

Prasthutha|

- Advertisement -

ತಿರುವನಂತಪುರಂ: ಸಿಎಎ-ಎನ್‌ಆರ್‌ಸಿ ವಿರೋಧಿ ಹೋರಾಟದ ಪ್ರಕರಣಗಳು ಮತ್ತು ಶಬರಿಮಲೆ ಮಹಿಳಾ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಲು ಕೇರಳ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಗಂಭೀರ ಸ್ವರೂಪವಿಲ್ಲದ ಪ್ರಕರಣಗಳನ್ನು ಹಿಂಪಡೆಯಲು ಇಂದು ಸಂಪುಟ ನಿರ್ಧರಿಸಿದೆ.

ಸಿಎಎ-ಎನ್‌ಆರ್‌ಸಿ ವಿರೋಧಿ ಆಂದೋಲನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ವಿವಿಧ ಪಕ್ಷಗಳು ಈ ಹಿಂದೆ ಒತ್ತಾಯಿಸಿದ್ದವು. ಶಬರಿಮಲೆ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಎನ್‌ಎಸ್‌ಎಸ್ ಮತ್ತು ಬಿಜೆಪಿ ಒತ್ತಾಯಿಸಿತ್ತು. ತಮಿಳುನಾಡು ಸರ್ಕಾರ ಕಳೆದ ವಾರ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಗಂಭೀರವಲ್ಲದ ಪ್ರಕರಣಗಳನ್ನು ಹಿಂಪಡೆಯಲು ಕೇರಳ ಕ್ಯಾಬಿನೆಟ್ ನಿರ್ಧರಿಸಿದೆ.

Join Whatsapp