ಬಿಲ್ಕಿಸ್ ಬಾನು ಪ್ರಕರಣದ ಸಾಕ್ಷಿಗೆ ಜೀವ ಬೆದರಿಕೆ: ಸಿಜೆಗೆ ಪತ್ರ ಬರೆದ ಸಂತ್ರಸ್ತ

Prasthutha|

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ ಪ್ರಮುಖ ಅಪರಾಧಿಯೊಬ್ಬನಿಂದ ತನಗೆ ಜೀವ ಬೆದರಿಕೆಯಿದೆ ಎಂದು ಸಾಕ್ಷಿದಾರರು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರಿಗೆ ಪತ್ರ ಬರೆದಿದ್ದು, ಈ ಸಂಬಂಧ ಸೂಕ್ತ ರಕ್ಷಣೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

2002ರ ಗುಜರಾತ್ ಹತ್ಯಾಕಾಂಡ ಸಂಬಂಧದ ಪ್ರಮುಖ ಸಾಕ್ಷಿದಾರ ಇಂತಿಯಾಝ್ ಘಾಂಚಿ, ತನಗೆ ಜೀವ ಬೆದರಿಕೆ ಇರುವ ಕುರಿತು ಸಿಜೆಐಗೆ ಪತ್ರ ಬರೆದಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಒದಗಿಸಲು ಆಗ್ರಹಿಸಿದ್ದಾರೆ.

ಅಲ್ಲದೆ ಇದರ ಪ್ರತಿಯನ್ನು ಗುಜರಾತ್ ಗೃಹ ಕಾರ್ಯದರ್ಶಿ, ರಾಷ್ಟ್ರೀಯ ಮಾನವ ಹಕ್ಕುಗಳು ಆಯೋಗ, ದಾಹೋದ್ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಕಳುಹಿಸಿದ್ದಾರೆ.

- Advertisement -

2002ರ ಗುಜರಾತ್’ನಲ್ಲಿ ಮುಸ್ಲಿಮರ ಮೇಲಿನ ಹತ್ಯಾಕಾಂಡ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಸಂಘಪರಿವಾರದ ಕಾರ್ಯಕರ್ತರನ್ನು ಇತ್ತೀಚೆಗೆ ಗುಜರಾತ್ ಸರ್ಕಾರ ಸನ್ನಡತೆಯ ಆಧಾರದಲ್ಲಿ ಸಬ್ ಜೈಲಿನಿಂದ ಬಿಡುಗಡೆಗೊಳಿಸಿತ್ತು.

Join Whatsapp