ಯುವತಿ ನೇಣಿಗೆ ಶರಣು: ಮೊಬೈಲ್ ನಲ್ಲಿತ್ತು ಸಾವಿನ ರಹಸ್ಯ, ಭಾವಿ ಪತಿಯ ಬಂಧನ

Prasthutha|

ತಿರುವನಂತಪುರಂ: ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಭಾವಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆತ್ಮಹತ್ಯೆಗೆ ಶರಣಾದವಳನ್ನು ಮಾನ್ಯ(22) ಎಂದು ಗುರುತಿಸಲಾಗಿದೆ. ಈಕೆ ತ್ರಿಕಲಯೂರ್ ಮನೆಯಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸದ್ಯ ಈಕೆಯನ್ನು ಮದುವೆಯಾಗಬೇಕಾಗಿದ್ದ ಯುವಕ ಅಶ್ವಿನ್(26) ವಿರುದ್ಧ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಮಾನ್ಯ ಕುಟುಂಬಸ್ಥರು ಆರೋಪ ಮಾಡಿದ ಬೆನ್ನಲ್ಲೇ ತನಿಖೆ ನಡೆಸಿದ ಪೊಲೀಸರಿಗೆ ಅಶ್ವಿನ್ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ. ಕಳೆದ 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾನ್ಯ ಹಾಗೂ ಅಶ್ವಿನ್ ನಿಶ್ಚಿತಾರ್ಥ ನಡೆದಿದ್ದು, ಈ ಮೊದಲು ಇಬ್ಬರು ಪ್ರೀತಿಯಲ್ಲಿದ್ದರು. ಬಳಿಕ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ಅಶ್ವಿನ್, ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮಾನ್ಯ ಜೊತೆಗಿನ ಸಂಬಂಧ ಕಡಿದುಕೊಂಡಿದ್ದನು. ಅಂತೆಯೇ ಇದೀಗ ಮದುವೆಯಿಂದ ಕೂಡ ದೂರ ಉಳಿಯುವ ಅಶ್ವಿನ್ ನಿರ್ಧಾರದಿಂದ ಮಾನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನ್ಯ ಅವರು ಬಳಸುತ್ತಿದ್ದ ಫೋನ್ನಿಂದ ಅವರ ಧ್ವನಿ ಸಂದೇಶಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಸದ್ಯ ವಿದೇಶದಿಂದ ಮರಳಿದ ಆರೋಪಿ ಅಶ್ವಿನ್ ನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.



Join Whatsapp