Home ಟಾಪ್ ಸುದ್ದಿಗಳು ರಸ್ತೆಗುಂಡಿಗೆ ಬಿದ್ದು ಗಾಯಗೊಂಡ ಮಹಿಳೆ ಮೃತ್ಯು

ರಸ್ತೆಗುಂಡಿಗೆ ಬಿದ್ದು ಗಾಯಗೊಂಡ ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೇ ವಸಂತನಗರದ  ಉಮಾದೇವಿ(43) ಸಾವನ್ನಪ್ಪಿದ್ದು, ಮಗಳು ಉಮಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ

ಮಲ್ಲೇಶ್ವರ ಸಂಚಾರ ಪೊಲೀಸರು ಆರೋಪಿ ಕೆಎಸ್ ಆರ್ ಟಿಸಿ ಬಸ್ ಜಪ್ತಿ ಮಾಡಿ ಚಾಲಕ ಮಾರುತಿ ಎಂಬವರನ್ನು ಬಂಧಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ  ಉಮಾದೇವಿ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಮಾ ಅವರು ಮೊನ್ನೆ ಶ್ರೀನಗರದಲ್ಲಿರುವ ಪುತ್ರಿ ವನಿತಾ ಮನೆಗೆ ಹೋಗಿದ್ದರು, ಅಲ್ಲಿಂದ ನಿನ್ನೆ ಬೆಳಗ್ಗೆ ವನಿತಾ ಜತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಬೆಳಗ್ಗೆ 9:30ರ ಸುಮಾರಿಗೆ ವಾಟಾಳ್ ನಾಗರಾಜ್ ರಸ್ತೆಯ ಸುಜಾತ ಥಿಯೇಟರ್ ಬಳಿ ಹೋಗುವಾಗ ರಸ್ತೆ ಗುಂಡಿ ಎದುರಾಗಿದೆ. ಗುಂಡಿ ನೋಡಿದ ವನಿತಾ ರಸ್ತೆ ಗುಂಡಿ ತಪ್ಪಿಸುವ ಭರದಲ್ಲಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ಟಿಸಿ ಬಸ್ ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಎಸ್ ಐ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಉಮಾ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ಮೃತಪಟ್ಟಿದ್ದಾರೆ.

Join Whatsapp
Exit mobile version