ಬೆಂಗಳೂರಿನಲ್ಲಿ ಮಳೆಗೆ ಯುವತಿ ಸಾವು| ಕಾರು ಚಾಲಕ ಬಂಧನ

Prasthutha|

ಬೆಂಗಳೂರು: ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಮಳೆ ನೀರಿನಲ್ಲಿ ಕಾರು ಮುಳುಗಡೆಯಾಗಿ ಇನ್ಫೋಸಿಸ್ ನಲ್ಲಿ ಟೆಕ್ಕಿಯಾಗಿರುವ ಯುವತಿಯೋರ್ವಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

- Advertisement -

ಹರೀಶ್ ಬಂಧಿತ ಕಾರು ಚಾಲಕ. ನೀರು ನಿಂತಿದ್ದರೂ ಬೇಜವಾಬ್ದಾರಿತನದಿಂದ ಅಂಡರ್ ಪಾಸ್​ನಲ್ಲಿ ಕಾರು ಚಲಾಯಿಸಿ ಅವಘಡಕ್ಕೆ ಕಾರಣನಾಗಿರುವ ಆರೋಪದಡಿ ಹರೀಶ್​ನನ್ನು ಬಂಧಿಸಲಾಗಿದೆ.

ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್​ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರ್ ಬಂದ್ ಬಿದ್ದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ಆರೋಪಿಸಲಾಗಿದೆ.

- Advertisement -

ಮತ್ತೊಂದೆಡೆ ಬಿಬಿಎಂಪಿ ಬೆಜವಾಬ್ದಾರಿಗೆ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿದೆ ಎಂದು ಆರೋಪಿಸಲಾಗಿದೆ. ಟೆಕ್ಕಿ ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ಬಿಬಿಎಂಪಿ ಹಾಗೂ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ.

ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಸುಮಾರು 5 ಅಡಿಯಷ್ಟು ಎತ್ತರಕ್ಕೆ ನೀರು ತಿಂಬಿತ್ತು. ಹೀಗಿದ್ದರೂ ಆರು ಮಂದಿ ಪ್ರಯಾಣಿಸುತ್ತಿದ್ದ ಕಾರು ಈ ಅಂಡರ್​ಪಾಸ್​ನಲ್ಲಿ ಹೋಗಿ ಮುಳುಗಿತ್ತು. ಕೂಡಲೇ ಎಚ್ಚೆತ್ತ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಆರು ಮಂದಿಯನ್ನು ರಕ್ಷಿಸಿದ್ದರು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ ಬಾನುರೇಖಾ ಸಾವನ್ನಪ್ಪಿದ್ದಳು. ಘಟನೆ ನಂತರ ಕಾರು ಚಾಲಕ ಪರಾರಿಯಾಗಿದ್ದನು. ಈ ಘಟನೆ ನಡೆದ ನಂತರ ಅದೇ ನೀರಿನಲ್ಲಿ ಆಟೋವೊಂದು ಮುಳುಗಡೆಯಾಗಿತ್ತು. ಆಟೋ ಚಾಲಕ ಬಚಾವ್ ಆಗಿದ್ದರೆ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಳು. ಈಕೆಯನ್ನೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದರು.

Join Whatsapp