ರಾಜಧಾನಿಯಲ್ಲಿ ಮತ್ತೆ ರಸ್ತೆ ಗುಂಡಿಗೆ ಮಹಿಳೆ ಬಲಿ

Prasthutha|

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗೆ ಇಂದು ಮತ್ತೊಂದು ಬಲಿಯಾಗಿದೆ. ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಗುಂಡಿ ತಪ್ಪಿಸಲು ಹೋದ ಮಹಿಳೆಯು ಆಯತಪ್ಪಿ ಬಿದ್ದಿದ್ದು ಈ ವೇಳೆ ಬಂದ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬ್ಯಾಡರಹಳ್ಳಿ ಬಳಿ ನಡೆದಿದೆ.

- Advertisement -

ಬ್ಯಾಡರಹಳ್ಳಿಯ ಶರ್ಮಿಳಾ (38) ಮೃತಪಟ್ಟವರು. ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಶರ್ಮಿಳಾ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ.

ಈ ವೇಳೆ ಬಂದ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಲಾರಿ ಚಾಲಕ ಮಾದೇಶ್ ನನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

- Advertisement -

ಈ ಹಿಂದೆಯೂ ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಹಲವರು ಸಾವನ್ನಪ್ಪಿದ್ದು, ಹೈಕೋರ್ಟ್ ಕೂಡ ಇತ್ತೀಚೆಗೆ ರಸ್ತೆ ಸರಿಪಡಿಸದ ಬಿಬಿಎಂಪಿ ವಿರುದ್ಧ ಹರಿಹಾಯ್ದಿತ್ತು.

Join Whatsapp