ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಪತಿ

Prasthutha|

ಬೆಂಗಳೂರು: ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ, ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಟ್ಟಿದ್ದ ಅಯ್ಯಪ್ಪ, ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆದಿತ್ತು.

- Advertisement -

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp