ಮಂಗಳೂರು: ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪಿಎಸ್ ಐ

Prasthutha|

ಮಂಗಳೂರು: ಕರ್ತವ್ಯ ನಿರತ ಮಹಿಳಾ CISF ಪಿಎಸ್ ಐ ಒಬ್ಬರು  ಗುಂಡು ಹೊಡೆದು ಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್ ನಲ್ಲಿ ನಡೆದಿದೆ.

- Advertisement -

ರಾಜಸ್ಥಾನ ಮೂಲದ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡವರು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಕೌಟುಂಬಿಕ  ವಿವಾದದ ಹಿನ್ನೆಲೆಯಲ್ಲಿ ಮನ ನೊಂದು ಡೆತ್ ನೋಟ್ ಬರೆದಿಟ್ಟು ಗುಂಡು ಹೊಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಜ್ಯೋತಿ ಯವರ ಗಂಡ MRPL ನಲ್ಲಿಯೇ ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ

ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp