ವಿದೇಶದಿಂದ ಊರಿಗೆ ಆಗಮಿಸಿದ್ದ ಮಹಿಳೆಯ ಬರ್ಬರ ಹತ್ಯೆ

Prasthutha|

ಉಡುಪಿ: ಬ್ರಹ್ಮಾವರದ ಅಪಾರ್ಟ್ ಮೆಂಟ್ ಒಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜುಲೈ 12ರಂದು ನಡೆದಿದೆ. ಗಂಗೊಳ್ಳಿ ಮೂಲದ ವಿಶಾಲ ಗಾಣಿಗ(35) ಕೊಲೆಯಾದ ಮಹಿಳೆಯಾಗಿದ್ದಾರೆ.

- Advertisement -


ಮಹಿಳೆಯ ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಲಾಗಿದೆ. ಕೊಲೆಯಾದ ಮಹಿಳೆ ಕೆಲವು ದಿನಗಳ ಹಿಂದೆಯಷ್ಟೆ ವಿದೇಶದಿಂದ ಆಗಮಿಸಿದ್ದರು. ತಮ್ಮ ತಂದೆಯ ಜೊತೆ ನಿನ್ನೆ ಗಂಗೊಳ್ಳಿಯ ಮನೆಗೆ ಹೋಗುವವರಿದ್ದರು. ದಾರಿ ಮಧ್ಯೆ ಬ್ಯಾಂಕ್ ನ ಕೆಲಸ ಇರುವ ಕಾರಣ ಅದನ್ನು ಮುಗಿಸಿ ಗಂಗೊಳ್ಳಿ ಮನೆಗೆ ಬರುವೆ ಎಂದು ತಿಳಿಸಿದ್ದರು. ಆದರೆ, ಸಂಜೆಯಾದರೂ ಮನೆಗೆ ಬಾರದ ಕಾರಣ ಮಗಳನ್ನು ಹುಡುಕಿ ಬ್ರಹ್ಮಾವರಕ್ಕೆ ತಂದೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.


ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp