ಕಡಬ ಆ್ಯಸಿಡ್ ದಾಳಿ: ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

Prasthutha|

ಮಂಗಳೂರು: ಕಡಬ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿದ್ದಾರೆ.

- Advertisement -

ಸದ್ಯ ವಿದ್ಯಾರ್ಥಿನಿಯರು ಮಂಗಳೂರು ನಗರದ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಡಾ.ನಾಗಲಕ್ಷ್ಮೀ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿ, ನಾನು ಒಬ್ಬಳು ತಾಯಿ ನನಗೆ ಅರ್ಥ ಆಗುತ್ತೆ. ಮಕ್ಕಳ ಮಾನಸಿಕ ಸ್ಥಿತಿ ಗತಿ ಹೇಗಿರುತ್ತೆ ಎಂದು. ಶಿಕ್ಷಣ ಸಚಿವರನ್ನ ಇಂದು ನಾನು ಭೇಟಿಯಾಗುತ್ತೇನೆ. ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ ಎಂದರು. ಇಂದು ಜಿಲ್ಲಾಡಳಿತ ಹಾಗು ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸುತ್ತೇನೆ. ತಕ್ಷಣ ಪರಿಹಾರವಾಗಿ ತಲಾ ನಾಲ್ಕು ಲಕ್ಷ ಸರಕಾರದಿಂದ ಕೊಡಿಸುತ್ತೇವೆ. ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ವ್ಯವಸ್ಥೆ ಮಾಡುತ್ತೇವೆ ಎಂದರು.

Join Whatsapp