ಪಕ್ಷಕ್ಕೆ ದ್ರೋಹ ಬಗೆದಿರುವ ಜಾರಕಿಹೊಳಿಯನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಲ್ಲ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಪಕ್ಷಕ್ಕೆ ದ್ರೋಹ ಬಗೆದಿರುವ ಮಾಜಿ ಸಚಿವ, ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಈ ಬಗ್ಗೆ ಅವರು ಕೊಪ್ಪಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಮೇಶ್ ಜಾರಕಿಹೊಳಿ ಪಕ್ಷಕ್ಕೆ ದ್ರೋಹ ಬಗೆದವರಾಗಿದ್ದಾರೆ. ಜಾರಕಿಹೊಳಿ ವಾಪಾಸು ಬಂದರೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಮಾತನಾಡುತ್ತಾ, ಪಕ್ಷವನ್ನು ಬಿಟ್ಟು ಹೋದವರು, ಪಕ್ಷಕ್ಕೆ ದ್ರೋಹ ಬಗೆದರವರು, ಮತ್ತೆ ಹೋಗಿ ಕೋಮುವಾದಿ ಬಿಜೆಪಿ ಸರಕಾರ ಬರುವಂತೆ ಮಾಡಿದವರು ವಾಪಾಸು ಬಂದರೆ ಮತ್ತೆ ಸೇರಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

Join Whatsapp