ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಪರಮೇಶ್ವರ್

Prasthutha|

ಉಡುಪಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ. ರಾಜ್ಯದ ಬಡವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಹೊರತು ರಾಜಕಾರಣಕ್ಕಾಗಿ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪಟ್ಟಣ ಪ್ರದೇಶದವರಿಗಿಂತ ಗ್ರಾಮೀಣ ಪ್ರದೇಶದ ಬಡವರು, ಕೂಲಿ ಕಾರ್ಮಿಕರಿಗೆ ಈ ಯೋಜನೆಗಳಿಂದ ಹೆಚ್ಚು ಅನುಕೂಲ ಆಗುತ್ತದೆ ಎಂಬುದು ನಮ್ಮ ಭಾವನೆಯಾಗಿದೆ. ಅದಕ್ಕಾಗಿ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಲೋಕಸಭಾ ಚುನಾವಣೆಯಲ್ಲಿ ನಾವು ಬಹಳಷ್ಟು ಕಡೆ ಸೋತಿದ್ದೇವೆ. ಈ ಸೋಲಿನ ವಿಶ್ಲೇಷಣೆ ಹಾಗೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಈಗಾಗಲೇ ಮಾತುಕತೆ ನಡೆಸಿದ್ದೇವೆ. ಎಲ್ಲಿ ನಾವು ಸೋತಿದ್ದೇವೆ ಮತ್ತು ಎಲ್ಲಿ ಎಡವಿದ್ದೇವೆ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.



Join Whatsapp