ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಒಮರ್ ಜತೆಗೂಡಿ ಕೆಲಸ: ಪ್ರಧಾನಿ ಮೋದಿ

Prasthutha|

ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -


ಅಲ್ಲದೆ ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಜತೆಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.


ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

- Advertisement -


‘ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಪ್ರಯತ್ನಕ್ಕೆ ಶುಭ ಹಾರೈಕೆಗಳು. ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಒಮರ್ ಮತ್ತು ಅವರ ತಂಡದೊಂದಿಗೆ ಜತೆಗೂಡಿ ಕೇಂದ್ರ ಸರ್ಕಾರವು ನಿಕಟವಾಗಿ ಕಾರ್ಯ ನಿರ್ವಹಿಸಲಿದೆ’ ಎಂದು ಹೇಳಿದ್ದಾರೆ.



Join Whatsapp