ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌

Prasthutha|

►ಇಂದು ಸಂಜೆ ಮುಂಬೈನಲ್ಲಿ ಭರ್ಜರಿ ರೋಡ್‌ ಶೋ

- Advertisement -

ನವದೆಹಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಟೀಂ ಇಂಡಿಯಾ ಆಟಗಾರರು ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದ್ದಾರೆ.

ವೆಸ್ಟ್‌ ಇಂಡೀಸ್‌ ನ ಬಾರ್ಬಡೋಸ್‌ ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

- Advertisement -

ಜೂ. 1ರಂದು ಬಾರ್ಬಡೋಸ್‌ ಗೆ ಭೀಕರ ಬೆರಿಲ್ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಭಾರತಕ್ಕೆ ಬರಲು ಆಗಿರಲಿಲ್ಲ. ಈಗ ವಿಶೇಷ​ ವಿಮಾನದ ಮೂಲಕ T20 ವಿಶ್ವಕಪ್​ ಟ್ರೋಫಿಯೊಂದಿಗೆ ಆಟಗಾರರೆಲ್ಲ ಆಗಮಿಸಿದರು.

Join Whatsapp