‘ಕೋವಿಡ್ ನಿರ್ವಹಣೆ ಮಾತ್ರ ಈಗಿನ ಆದ್ಯತೆ ; ಬೇರೆ ವಿಷಯಗಳ ಕುರಿತು ಈಗ ತಲೆಕೆಡಿಸಿಕೊಳ್ಳಲ್ಲ’ : ನಾಯಕತ್ವ ಬದಲಾವಣೆ ಕುರಿತು ಯಡಿಯೂರಪ್ಪ

Prasthutha|

ಕೋವಿಡ್ ನಿರ್ವಹಣೆ ಕೆಲಸ ಮಾತ್ರ ನನ್ನ ಮುಂದಿರುವ ಆದ್ಯತೆ. ಕೊರೋನಾ ನಿಯಂತ್ರಿಸುವುದು, ಜನಹಿತ ಕಾಪಾಡುವ ಕೆಲಸದಲ್ಲಿ ನಿರತನಾಗಿದ್ದೇನೆ, ಈಗ ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

- Advertisement -

ಮಾಜಿ ಪ್ರಧಾನಿ ದಿ.ಪಂಡಿತ್ ಜವಾಹರಲಾಲ್ ನೆಹರೂ ಅವರ ಸಂಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಯಡಿಯೂರಪ್ಪ ಈ ಹೇಳಿಕೆ ನೀಡಿದರು.

  ಕೋವಿಡ್ ಎದುರಿಸುವುದು ನನ್ನ ಮೊದಲ ಕೆಲಸ, ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ, ಒಟ್ಟಾಗಿ ಸಚಿವರು, ಶಾಸಕರು ಕೋವಿಡ್ ಎದುರಿಸಬೇಕು ಎಂದು ಹೇಳಿದರು. ಶಾಸಕಾಂಗ ಪಕ್ಷದ ಸಭೆ ನಡೆಸುವ  ಬಗ್ಗೆ ಕೇಳಿದ ಪ್ರಶ್ನೆಗೆ, ಸಭೆ ಬಗ್ಗೆ ನಿಮ್ಮ ಜತೆ ಚರ್ಚಿಸುವ ಅಗತ್ಯ ಇಲ್ಲ ಎಂದು ಪತ್ರಕರ್ತರ ವಿರುದ್ಧ ಮುಖ್ಯಮಂತ್ರಿ ಗರಂ ಆಗಿದ್ದಾರೆ.

Join Whatsapp