Home ಟಾಪ್ ಸುದ್ದಿಗಳು ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ | ನಾಳೆ ಪ್ರಮಾಣ ವಚನ

ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ | ನಾಳೆ ಪ್ರಮಾಣ ವಚನ

ಬೆಂಗಳೂರು : ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ. ಬುಧವಾರ(ನಾಳೆ) ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆ ಇಂದು ಬಿರುಸುಗೊಂಡಿದೆ.

ಬುಧವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇನೆ. ನೂತನ ಸಚಿವರಿಗೆ ಮಂಗಳವಾರ ಸಂಜೆ ಮಾಹಿತಿ ನೀಡಲಾಗುವುದು ಎಂದಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಗೊಂದಲ ಇಲ್ಲ. ಈ ಬಗ್ಗೆ ಇರುವ ಊಹಾಪೋಹಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದ್ದಾರೆ.

ಖಾಲಿಯಿರುವ ಏಳು ಸ್ಥಾನಗಳ ಪೈಕಿ, ಆರು ಸ್ಥಾನಗಳಿಗೆ ಶಾಸಕರ ಹೆಸರು ಅಂತಿಮಗೊಂಡಿದೆ ಎನ್ನಲಾಗುತ್ತಿದೆ. ಇನ್ನೊಂದು ಸ್ಥಾನಕ್ಕೆ ಲಾಬಿ ನಡೆಯುತ್ತಿದೆ. ಇಂದು ಸಂಜೆ ವೇಳೆಗೆ ನೂತನ ಸಚಿವರುಗಳ ಹೆಸರು ಯಡಿಯೂರಪ್ಪ ಬಹಿರಂಗ ಪಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.  

Join Whatsapp
Exit mobile version