ನೂತನ ಸಚಿವರ ಫೈನಲ್ ಪಟ್ಟಿ ಪ್ರಕಟ | ಯಡಿಯೂರಪ್ಪ ಸಂಪುಟ ಕಸರತ್ತು ಕೊನೆಗೂ ಅಂತಿಮ

Prasthutha|

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟಕ್ಕೆ ಇಂದು ಹೊಸದಾಗಿ ಸೇರಿಕೊಳ್ಳುವ ಏಳು ಶಾಸಕರ ಪಟ್ಟಿ ಅಂತಿಮಗೊಂಡಿದ್ದು, ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಅಂಗಾರ, ವಿಧಾನಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.

ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.

- Advertisement -

ಸದ್ಯಕ್ಕೆ ಸಂಪುಟದಲ್ಲಿ ಒಂದು ಸ್ಥಾನ ಖಾಲಿಯಿದ್ದು, ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಮುಂದೆ ಯಾರಿಗೆ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.

Join Whatsapp