ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್ ಕಿಡಿ

Prasthutha|

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು ಹರಿಹಾಯ್ದರು.

ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ದೂರು ಕೊಟ್ಟಿದ್ದಾರೆ. ಕಂಪ್ಲೆಂಟ್ ಕೊಟ್ಟಿದ್ದಾರೆ. ಆದರೆ ಏನೂ ನಡೆಯುತ್ತಿಲ್ಲ. ಯತ್ನಾಳ್ಗೆ ನೋಟಿಸ್ ಕೊಡಲಿಲ್ಲ. ಮರ್ಯಾದೆ ಹೋಗಬಾರದು ಎಂದು ಈ ಹೇಳಿಕೆ ಕೊಡುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ದೂರಿದರು.

Join Whatsapp
Exit mobile version