ಲಾಕ್‌ಡೌನ್ ವಿಸ್ತರಣೆ ಕುರಿತು ಸಚಿವ ಸಂಪುಟ ಸಭೆ ಬಳಿಕ ತೀರ್ಮಾನ : ಯಡಿಯೂರಪ್ಪ

Prasthutha|

ಬೆಂಗಳೂರು : ಲಾಕ್‌ಡೌನ್ ವಿಸ್ತರಣೆ ಕುರಿತು ನಾಳೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕಷ್ಟೇ ತೀರ್ಮಾನಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

- Advertisement -

 ಇಂದು ಸಂಜೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ, ಪ್ರತಿಯೊಂದು ಜಿಲ್ಲೆಗಳ ಮಾಹಿತಿ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟದ ಸಭೆ ಮಹತ್ವ ಪಡೆದಿದೆ.

“ಇಂದು ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಿಖರ ಮಾಹಿತಿ ಪಡೆಯಲಿದ್ದೇವೆ. ನಾಳೆ ಈ ಕುರಿತು ಸಚಿವ ಸಂಪುಟದ ಸಭೆ ಬಳಿಕ ಚರ್ಚಿಸಿ ಲಾಕ್‌ಡೌನ್ ಕುರಿತು ತೀರ್ಮಾನಿಸುತ್ತೇವೆ”ಎಂದು ತಿಳಿಸಿದ್ದಾರೆ. ಈ ಹಿಂದೆ ಮೇ 23ರಂದು ಸಭೆ ನಡೆಸಿ ಲಾಕ್‌ಡೌನ್ ಬಗ್ಗೆ ತಿಳಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಸಂದರ್ಭ ಹೇಳಿದ್ದರು.

- Advertisement -

ಸಂಪುಟದ ಬಹುತೇಕ ಸಚಿವರು ಈಗಾಗಲೇ ಲಾಕ್‌ಡೌನ್ ವಿಸ್ತರಣೆಗೆ ಒಲವು ತೋರಿದ್ದಾರೆ.

Join Whatsapp