ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೌಡಿಗಳು

Prasthutha|

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ಅವರ ಕಾರ್ಯಕ್ರಮದಲ್ಲಿ ರೌಡಿಗಳು ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

- Advertisement -

ಕಾರ್ಯಕ್ರಮದಲ್ಲಿ ರೌಡಿಶೀಟರ್ ಬೆತ್ತನಗೆರೆ ಮಂಜ, ಹುಸ್ಕೂರು ಶಿವ ಭಾಗಿಯಾಗಿದ್ದಾರೆ. ಬೆತ್ತನಗೆರೆ ಮಂಜ ಬೆಮೆಲ್‌ ಕೃಷ್ಣಪ್ಪ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಹುಸ್ಕೂರು ಶಿವ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದಾನೆ. ಇವರಿಬ್ಬರು ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ‘2023ಕ್ಕೆ ಮತ್ತೊಮ್ಮೆ ಶಾಸಕರು ಎಸ್​.ಆರ್. ವಿಶ್ವನಾಥ್’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇತ್ತೀಚೆಗೆ ನೆಲಮಂಗಲದ ನಟೋರಿಯಸ್ ರೌಡಿ ಶೀಟರ್ ಬೆತ್ತನಗೆರೆ ಶಂಕರ ಬಿಜೆಪಿ ಪಕ್ಷ ಸೇರ್ಪಡೆಯಾಗುವ ಸುದ್ದಿ ರಾಜಕೀಯ ರಂಗದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

- Advertisement -

ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್​ಗಳ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್ ಸುನೀಲ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡ ವೇಳೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಬಳಿಕ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು. ತದನಂತರದ ದಿನಗಳಲ್ಲಿ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಜೊತೆ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ ವೇದಿಕೆ ಹಂಚಿಕೊಂಡಿದ್ದ.

Join Whatsapp