‘ಹೌದು ನಮ್ಮದು ಇಡಿ ಸರ್ಕಾರ’: ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

Prasthutha|

ಮುಂಬೈ: ಜಾರಿ ನಿರ್ದೇಶನಾಲಯದ ಕ್ರಮಕ್ಕೆ ಹೆದರಿ ಬಂಡಾಯ ಶಾಸಕರು ಏಕನಾಥ್ ಶಿಂಧೆ ಬಣವನ್ನು ಸೇರಿಕೊಂಡಿದ್ದಾರೆ ಎಂಬ ಪ್ರತಿಪಕ್ಷಗಳ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಸರ್ಕಾರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಹೌದು ನಮ್ಮದು ಇಡಿ ಸರ್ಕಾರ ಅಂದರೆ ಏಕನಾಥ್ ಮತ್ತು ದೇವೆಂದ್ರ ಸರ್ಕಾರ ಎಂದು ತಿರುಗೇಟು ನೀಡಿದ್ದಾರೆ.

- Advertisement -

ಸದನದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಅಧಿಕಾರಕ್ಕಾಗಿ ಯಾವತ್ತೂ ಕಚ್ಚಾಡುವುದಿಲ್ಲ ಎಂದು ಭರವಸೆ ನೀಡಿದರು. ನನ್ನನ್ನು ಮುಖ್ಯಮಂತ್ರಿ ಮಾಡಿದ ಅದೇ ಪಕ್ಷ, ನನ್ನನ್ನು ಮನೆಯಲ್ಲಿ ಕೂರಲು ಹೇಳಿದರೆ ಹಿಂದೇಟು ಹಾಕುವುದಿಲ್ಲ ಎಂದು ತಿಳಿಸಿದರು.

NDA ಮೈತ್ರಿಕೂಟಕ್ಕೆ ಜನಾದೇಶ ಲಭಿಸಿದ್ದು, ಆದರೆ ನಮ್ಮನ್ನು ಉದ್ದೇಶಪೂರ್ವಕವಾಗಿ ಬಹುಮತ ಪಡೆಯದಂತೆ ಮಾಡಲಾಗಿದೆ. ಆದರೆ ಏಕನಾಥ್ ಶಿಂಧೆ ಜತೆಗೂಡಿ ಮತ್ತೊಮ್ಮೆ ಶಿವಸೇನೆ ಜೊತೆ ಸೇರಿ ಸರ್ಕಾರ ರಚಿಸಿದ್ದೇವೆ. ನಿಜವಾದ ಶಿವಸೈನಿಕರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಬಿಜೆಪಿಯ ಆಜ್ಞೆಯಂತೆ ನಾನು ಉಪಮುಖ್ಯಮಂತ್ರಿಯಾದೆ,” ಎಂದು ಅವರು ಹೇಳಿದರು.

Join Whatsapp