ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 14 ಮಂದಿಯ ವಿರುದ್ಧ FIR

Prasthutha|

- Advertisement -

ರಾಮನಗರ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ 14 ಮಂದಿಯ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ.

ಶನಿವಾರ ರಾಮನಗರದ ಚನ್ನಪಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿ.ಪಿ. ಯೋಗೇಶ್ವರ್ ಅವರ ಕಾರು ಚಾಲಕ ವೆಂಕಟೇಶ್ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದ. ಈ ದೂರಿನ ಮೇರೆಗೆ ಪೊಲೀಸರು 14 ಜನರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.



Join Whatsapp