ಗುಂಡಿನ ದಾಳಿ ನಡೆಸಿದವರ ಬಗ್ಗೆ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಮಾಹಿತಿಯಿದೆ: ಅಸದುದ್ದೀನ್ ಉವೈಸಿ

Prasthutha|

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ತರಾಟೆಗೆ ತೆಗೆದ ಸಂಸದ ಅಸದುದ್ದೀನ್ ಉವೈಸಿ, ನನ್ನ ಮೇಲೆ ಗುಂಡಿನ ದಾಳಿ ನಡೆಸಿದವರ ಬಗ್ಗೆ ಆದಿತ್ಯನಾಥ್ ಗೆ ಮಾಹಿತಿಯಿದೆ ಎಂದು ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶದ ಅಸ್ಮೋಲಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅಸದುದ್ದೀನ್ ಉವೈಸಿ, ತನ್ನ ಮೇಲೆ ಗುಂಡು ಹಾರಿಸಿದವರು ಗೋಡ್ಸೆ ವಂಶಸ್ಥರಾಗಿದ್ದು, ಮಹಾತ್ಮ ಗಾಂಧಿಯನ್ನು ಕೊಂದವರೇ ಈ ಕೃತ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂತಹ ವ್ಯಕ್ತಿಗಳು ಕಾನೂನಿನ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆದಿತ್ಯನಾಥ್ ವಿರುದ್ಧ ಉವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp