Home ಟಾಪ್ ಸುದ್ದಿಗಳು ಗುಂಡಿನ ದಾಳಿ ನಡೆಸಿದವರ ಬಗ್ಗೆ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಮಾಹಿತಿಯಿದೆ: ಅಸದುದ್ದೀನ್ ಉವೈಸಿ

ಗುಂಡಿನ ದಾಳಿ ನಡೆಸಿದವರ ಬಗ್ಗೆ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಮಾಹಿತಿಯಿದೆ: ಅಸದುದ್ದೀನ್ ಉವೈಸಿ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ತರಾಟೆಗೆ ತೆಗೆದ ಸಂಸದ ಅಸದುದ್ದೀನ್ ಉವೈಸಿ, ನನ್ನ ಮೇಲೆ ಗುಂಡಿನ ದಾಳಿ ನಡೆಸಿದವರ ಬಗ್ಗೆ ಆದಿತ್ಯನಾಥ್ ಗೆ ಮಾಹಿತಿಯಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಅಸ್ಮೋಲಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅಸದುದ್ದೀನ್ ಉವೈಸಿ, ತನ್ನ ಮೇಲೆ ಗುಂಡು ಹಾರಿಸಿದವರು ಗೋಡ್ಸೆ ವಂಶಸ್ಥರಾಗಿದ್ದು, ಮಹಾತ್ಮ ಗಾಂಧಿಯನ್ನು ಕೊಂದವರೇ ಈ ಕೃತ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂತಹ ವ್ಯಕ್ತಿಗಳು ಕಾನೂನಿನ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆದಿತ್ಯನಾಥ್ ವಿರುದ್ಧ ಉವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version