ರಾಮಮಂದಿರದ ಗರ್ಭಗುಡಿಗೆ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ

Prasthutha|

ಅಯೋಧ್ಯೆ: ರಾಮಮಂದಿರದ ಗರ್ಭಗುಡಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇಂದು ಅಯೋಧ್ಯೆಗೆ ಭೇಟಿ ನೀಡಿದ ಯೋಗಿ, ರಾಮಮಂದಿರದ ಗರ್ಭಗುಡಿಯ ಮೊದಲ ಶಿಲೆಗೆ ಪೂಜೆ ಸಲ್ಲಿಸಿದ್ದಾರೆ.

- Advertisement -

ರಾಮ ಮಂದಿರದ ನಿರ್ಮಾಣದ ಹೊಣೆ ಹೊತ್ತಿರುವ ರಾಮ ಜನ್ಮಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆಯನ್ನು ಬಳಸಿ, ರಾಜಸ್ಥಾನದ ಮಖ್ರಾನಾ ಬೆಟ್ಟದಿಂದ ತರಿಸಲಾದ ಬಿಳಿ ಅಮೃತ ಶಿಲೆಯಿಂದ ನಿರ್ಮಾಣ ಮಾಡಲಾಗುವುದು ಎಂದು ಹೇಳಿದೆ.

ಆಗಸ್ಟ್ 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದ ಭೂಮಿ ಪೂಜೆ ನಡೆಸಿ, ಶಂಕು ಸ್ಥಾಪನೆ ನೆರವೇರಿಸಿದ್ದರು.

Join Whatsapp