ಉತ್ತರ ಪ್ರದೇಶದ ಅಭಿವೃದ್ಧಿಗೆ ಆದಿತ್ಯನಾಥ್ ಕೊಡುಗೆ ಶೂನ್ಯ । ಅರ್ಚಕನ ವೀಡಿಯೋ ವೈರಲ್

Prasthutha|

ಲಕ್ನೋ: ಮುಖ್ಯಮಂತ್ರಿ ಆದಿತ್ಯನಾಥ್, ರಾಮನ ಹೆಸರಿನಲ್ಲಿ ಮತ ಪಡೆದರು ಮತ್ತು ಕೇವಲ ಮತಗಳಿಗಾಗಿ ಜೈ ಶ್ರೀರಾಮ್ ಸ್ಮರಣೆ ಮಾಡುತ್ತಿದ್ದಾರೆ ಎಂದು ಅರ್ಚಕರೊಬ್ಬರು ಹೇಳುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

- Advertisement -

ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದ ಅರ್ಚಕ, ತನ್ನ ಅಧಿಕಾರವಧಿಯ ಕೊನೆಯ ಗಳಿಗೆಯಲ್ಲಿ ಸಾರ್ವಜನಿಕರಿಗಾಗಿ ಏನನ್ನೂ ಮಾಡದ ಕಾರಣ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಿಲ್ಲ ಎಂದು ಹೇಳಿರುವುದು ವೀಡಿಯೋದಲ್ಲಿದೆ.

ಆದಿತ್ಯನಾಥ್ ಉತ್ತರ ಪ್ರದೇಶಕ್ಕಾಗಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಅದರಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆಯೇರಿಕೆ ಮತ್ತು ನಿರುದ್ಯೋಗದ ಕುರಿತು ಮಾತನಾಡಿದ್ದಾರೆ. ಮಹಿಳೆಯರು ಮತ್ತು ಸಣ್ಣ ಪ್ರಮಾಣದ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

- Advertisement -

ಈ ನಡುವೆ ಆದಿತ್ಯನಾಥ್ ರಾಜ್ಯದ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಜನರು ತಮ್ಮ ಮುಂದಿನ ಮುಖ್ಯಮಂತ್ರಿಯಾಗಿ ಸರಿಯಾದ ವ್ಯಕ್ತಿಯನ್ನು ಆಯ್ಕೆ ಮಾಡುವ ಸಂದರ್ಭ ಎಂದು ಅವರು ತಿಳಿಸಿದರು.

Join Whatsapp