ಉಡುಪಿ: ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ !

Prasthutha|

ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಸದ್ಯ ಗಾಯಾಳು ಮಹಿಳೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

 ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ. ರೀನಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp