ರೈಲಿನ ಒಳಗಡೆಯೇ ಯುವಕನ ಬರ್ಬರ ಕೊಲೆ

Prasthutha|

ಹುಬ್ಬಳ್ಳಿ: ಯುವಕನೋರ್ವನನ್ನು ರೈಲಿನ ಒಳಗಡೆಯೇ ಬರ್ಬರವಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -


ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿ ನ ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಬಳಿಕ ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ.

- Advertisement -

Join Whatsapp