ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

Prasthutha|

ಬೆಂಗಳೂರು: ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಭೀಕರವಾಗಿ  ಕೊಲೆಗೈದಿರುವ ಘಟನೆ ತಡರಾತ್ರಿ ಹೆಗಡೆನಗರದ ಬಾಲಾಜಿ ಲೇಔಟ್ ನಲ್ಲಿ ನಡೆದಿದೆ.

- Advertisement -

ಸಲ್ಮಾನ್ (20) ಕೊಲೆಯಾದ ಯುವಕನಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಹೆಗಡೆನಗರದಲ್ಲಿರುವ ತಂದೆಯ ಫರ್ನಿಚರ್ ಅಂಗಡಿ ಮತ್ತು ಹೋಟೆಲ್ ಕೆಲಸ ಮುಗಿಸಿ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ   ಹಿಂದಿರುಗುವಾಗ ಮೂವರು ದುಷ್ಕರ್ಮಿಗಳು ಸಲ್ಮಾನ್’ಗೆ ಚಾಕುವಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.

- Advertisement -

ಸ್ಥಳಕ್ಕೆ ಸಂಪಿಗೇಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ ಎಂದು ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

Join Whatsapp