ಕೂದಲು ಉದುರುತ್ತಿದೆ ಎಂದು ಆತ್ಮಹತ್ಯೆಗೈದ ಯುವತಿ

Prasthutha|

ಮೈಸೂರು: ತಲೆಕೂದಲು ಹೆಚ್ಚಾಗಿ ಉದುರುತ್ತಿವೆ ಎಂದು ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೈದ ಘಟನೆ ರಾಘವೇಂದ್ರ ನಗರ ಬಡಾವಣೆಯಲ್ಲಿ ನಡೆದಿದೆ.

- Advertisement -


ಕಾವ್ಯಶ್ರೀ(22) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದಳು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆಯದಿದ್ದು, ಕೂದಲು ಸಂಪೂರ್ಣವಾಗಿ ಕಳೆದುಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತು ಆಕೆ ಸಾವಿನ ದಾರಿ ಹಿಡಿದಿದ್ದಾಳೆ ಎಂದು ತಿಳಿದು ಬಂದಿದೆ.


ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Join Whatsapp