ಮೆಟ್ರೋ ನಿಲ್ದಾಣದಲ್ಲಿ ಕೇಜ್ರಿವಾಲ್’ಗೆ ಬೆದರಿಕೆ ಸಂದೇಶ: ಯುವಕನ ಬಂಧನ

Prasthutha|

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಗೀಚುಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಬರೆಯುತ್ತಿದ್ದ ಯುವಕನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು 33 ವರ್ಷದ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ.


ಮೆಟ್ರೊ ರೈಲುಗಳ ಕೋಚ್ಗಳು ಹಾಗೂ ಸೈನ್ ಬೋರ್ಡ್ ಗಳಲ್ಲಿ ಗೀಚುತ್ತಿದ್ದ ಯುವಕನ ದೃಶ್ಯಗಳು ಸಿಸಿಟಿವಿ ವಿಡಿಯೊದಲ್ಲಿ ಕಂಡುಬಂದಿದ್ದವು. ಅಂಕಿತ್ ಗೋಯಲ್ ತನ್ನ ಇನ್ ಸ್ಟಾಗ್ರಾಂ ಖಾತೆಯಲ್ಲಿ ಗೀಚುಬರಹಗಳ ಫೋಟೊಗಳನ್ನು ಹಂಚಿಕೊಂಡಿದ್ದ. ಆತನೇ ಗೀಚುಬರಹ ಬರೆದಿರಬಹುದೆಂದು ಪೊಲೀಸರು ಶಂಕಿಸಿದ್ದರು.
ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Join Whatsapp