Home ಟಾಪ್ ಸುದ್ದಿಗಳು ಆಂಧ್ರ ಮುಖ್ಯಮಂತ್ರಿಗೆ ಬಾಂಬ್ ಬೆದರಿಕೆ ಹಾಕಿದ್ದ ಯುವಕನ ಬಂಧನ

ಆಂಧ್ರ ಮುಖ್ಯಮಂತ್ರಿಗೆ ಬಾಂಬ್ ಬೆದರಿಕೆ ಹಾಕಿದ್ದ ಯುವಕನ ಬಂಧನ

ಅಮರಾವತಿ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ಬಾಂಬ್ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಮಹೇಂದ್ರವರಂನ ರಾಜಾಪಲೇಮ್ ಫಣಿ (27) ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿ ಜಗನ್ ಮೋಹನ್ ರೆಡ್ಡಿ ಅವರನ್ನು ಮಾನವ ಬಾಂಬರ್ ಬಳಸಿ ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ಬೆದರಿಕೆ ಹಾಕಿದ್ದು, ಬಳಿಕ ಟ್ವೀಟ್‌ಗಳು ವೈರಲ್ ಆಗಿದ್ದನ್ನು ಗಮನಿಸಿ ಅವುಗಳನ್ನು ಅಳಿಸಿ ಹಾಕಿದ್ದ.

ಈ ಕುರಿತು ಜಗನ್ ಸೇವಾದಳದ ಉಪಾಧ್ಯಕ್ಷ ಮಲ್ಯಂ ಶ್ರಿಕಾಂತ್ ಎನ್ನುವರು ತಿರುಪತಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಐಪಿ ವಿಳಾಸ ಆಧರಿಸಿ ಬೆದರಿಕೆ ಹಾಕಿದ್ದವನನ್ನು ಬಂಧಿಸಿದ್ದಾರೆ.

Join Whatsapp
Exit mobile version