ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಯುವಕರಿಗೆ ಹಲ್ಲೆ, ಇಬ್ಬರು ರೌಡಿ ಶೀಟರ್ ಗಳ ಬಂಧನ

Prasthutha|

ಮಂಗಳೂರು: ನಗರದ ವೆಲೆನ್ಸಿಯಾದ ಬಳಿ ಯುವಕರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಿದ್ದಾರೆ.

- Advertisement -


ಬಜಾಲ್ ಜಲ್ಲಿಗುಡ್ಡೆಯ ಪ್ರೀತಂ ಪೂಜಾರಿ (27) ಮತ್ತು ಪಡೀಲ್ ನಿವಾಸಿ ಧೀರಜ್ ಕುಮಾರ್ (25) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.


ಈ ಇಬ್ಬರು ರೌಡಿಶೀಟರ್ ಗಳು ರವಿವಾರ ಸಂಜೆ ವೆಲೆನ್ಸಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುತ್ತಿದ್ದರು. ಇದನ್ನು ಕಂಡ ಸ್ಥಳೀಯ ಐಡಿಯಲ್ ಚಿಕನ್ ಅಂಗಡಿಯ ಸಿಬ್ಬಂದಿಗಳಾದ ಸುನೀಲ್ ಮಾರ್ಡಿ, ಅನಂತ, ಜೀವನ್ ಎಂಬವರು ತಡೆಯಲು ಮುಂದಾಗಿದ್ದು, ಇದರಿಂದ ಕುಪಿತಗೊಂಡ ರೌಡಿಶೀಟರ್ ಗಳು ಐಡಿಯಲ್ ಚಿಕನ್ ಅಂಗಡಿಯ ಸಿಬ್ಬಂದಿಗೆ ಕಲ್ಲು ಮತ್ತು ಹೆಲ್ಮೆಟ್ ನಿಂದ ಹಲ್ಲೆ ನಡೆಸಿ ಚೂರಿಯಿಂದ ಇರಿಯಲು ಯತ್ನಿಸಿದ್ದರು. ಅಷ್ಟರಲ್ಲಿ ಜಮಾಯಿಸಿದ ಸಾರ್ವಜನಿಕರು ಮಧ್ಯ ಪ್ರವೇಶಿಸಿದಾಗ ರೌಡಿಶೀಟರ್ ಗಳು ಅವರಿಗೂ ಚೂರಿ ತೋರಿಸಿ ಬೆದರಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ತಕ್ಷಣ ಧಾವಿಸಿ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಿದ್ದಾರೆ.

- Advertisement -





Join Whatsapp