Home ಟಾಪ್ ಸುದ್ದಿಗಳು ಸಂಘಪರಿವಾರದಿಂದ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ : ಮೆರವಣಿಗೆ ವೇಳೆ ಯುವಕನ ಮೇಲೆ ಗುಂಪು ಹಲ್ಲೆ !

ಸಂಘಪರಿವಾರದಿಂದ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ : ಮೆರವಣಿಗೆ ವೇಳೆ ಯುವಕನ ಮೇಲೆ ಗುಂಪು ಹಲ್ಲೆ !

ಮಂಡ್ಯ: ಹನುಮಾನ್‌ ಮಾಲಧಾರಿಗಳ ಸಂಕೀರ್ತನಾ ಯಾತ್ರೆ ಅಂಗವಾಗಿ ಗುರುವಾರ ಶ್ರೀರಂಗಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಸಂದರ್ಭ ರ‍್ಯಾಲಿಯಲ್ಲಿದ್ದ ಯುವಕರು ಜಾಮೀಯಾ ಮಸೀದಿ ಬಳಿ ಯುವಕನ ಮೇಲೆ ಗುಂಪು ಹಲ್ಲೆ ಮಾಡಿದ್ದಾರೆ.

ಹಿಂದೂ ಜಾಗರಣ ವೇದಿಕೆ ವತಿಯಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದ ಸಂದರ್ಭ ಯುವಕನಿಗೆ ಗುಂಪೊಂದು ಹಲ್ಲೆ ನಡೆಸಿದೆ. ಯುವಕ ತಮ್ಮನ್ನೇ ಗಮನಿಸುತ್ತಿದ್ದಾನೆಂದು ಆರೋಪಿಸಿ ಮೆರವಣಿಗೆಯಲ್ಲಿದ್ದ ಕಿಡಿಗೇಡಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆ ಬಳಿಕ ಪೊಲೀಸರು ಆತನನ್ನು ಗುಂಪು ಹಲ್ಲೆಯಿಂದ ರಕ್ಷಿಸಿದ್ದಾರೆ ಎನ್ನಲಾಗಿದೆ..

ಸಂಕೀರ್ತನಾ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಜಾಮೀಯಾ ಮಸೀದಿ ಮೇಲೆ ದಾಳಿ ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಮಸೀದಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು.

Join Whatsapp
Exit mobile version